ವಿಜಯಪುರ: ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಮುರುಗೇಶ್ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ್ ಅವರು, ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದ್ನು ನೆನಪಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮಾಜಿ ಸಚಿವ ಮುರುಗೇಶ್ ನಿರಾಣಿಗೆ ನಾನು ದನ ಕಾಯುವವನು ಎಂಬ ಶಬ್ಧವನ್ನು ಎಲ್ಲಿಯೂ ಬಳಸಿಲ್ಲ. ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ ದನ ಕಾಯುವುದು ಗೌರವದ ಕೆಲಸ. ದನಕಾಯುವವರನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…