ರಾಜ್ಯ

ಹೈಕಮಾಂಡ್‌ ವರದಿ ಕೇಳುವುದರಲ್ಲಿ ತಪ್ಪೇನಿಲ್ಲ: ಸಚಿವ ಸುಧಾಕರ್‌

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವರದಿ ಕೇಳಿದ್ದು, ನಾನು ಸಹ ನನ್ನ ಇಲಾಖೆ ವರದಿಯನ್ನು ನೀಡಿದ್ದೇನೆ ಅವರು ವರದಿ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.4) ಹೈಕಮಾಂಡ್‌ನಿಂದ ಸಚಿವರ ವರದಿ ಕೇಳಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ ಎಲ್ಲಾ ಇಲಾಖೆಯ ಸಚಿವರ ವರದಿ ಕೇಳಿದೆ. ವರದಿ ಪಡೆಯುವ ಅಧಿಕಾರ ಹೈಕಮಾಂಡ್‌ಗೆ ಇದೆ. ವರದಿ ನೀಡಿದ ಮೇಲೆ ಹೈಕಮಾಂಡ್‌ ನಾಯಕರು ಅದನ್ನು ಪರಿಶೀಲಿಸುತ್ತಾರೆ. ಹೀಗಾಗಿ ಹೈಕಮಾಂಡ್‌ ವರದಿ ಕೇಳಿರೋದರಲ್ಲಿ ಏನು ತಪ್ಪಿಲ್ಲ ಎಂದಿದ್ದಾರೆ.

ಪಕ್ಷದಿಂದ ಕೊಟ್ಟಿರೋ ಭರವಸೆಗಳನ್ನು ಈಡೇರಿಸಲು ಆಯಾಯ ಇಲಾಖೆಯಲ್ಲಿ ಜವಾಬ್ದಾರಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಶಾಸಕರಿಗೆ ಸಚಿವ ಸ್ಥಾನ ನೀಡಿರವುದು. ಅದನ್ನು ಬಿಟ್ಟು ಸಚಿವರು ಕಾರಿನಲ್ಲಿ ಓಡಾಡಿಕೊಂಡು ಇರುವುದಕ್ಕೆ ಅಲ್ಲ. ಕಾಂಗ್ರೆಸ್‌ ಪಕ್ಷದ ಹೆಸರು, ವರ್ಚಸ್ಸು ವೃದ್ದಿ ಮಾಡೋ ಜವಾಬ್ದಾರಿ ಶಾಸಕರು ಹಾಗೂ ಮಂತ್ರಿಗಳ ಮೇಲಿದೆ.ನಮಗೆ ನೀಡಿರುವ ಸಚಿವ ಸ್ಥಾನದ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಿದ್ದಾರಾ ಅಥವಾ ಇಲ್ಲವಾ ಎಂದು ತಿಳಿಯಲು ವರದಿ ಕೇಳಿದ್ದಾರೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago