ರಾಜ್ಯ

ಹೈಕಮಾಂಡ್‌ ವರದಿ ಕೇಳುವುದರಲ್ಲಿ ತಪ್ಪೇನಿಲ್ಲ: ಸಚಿವ ಸುಧಾಕರ್‌

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವರದಿ ಕೇಳಿದ್ದು, ನಾನು ಸಹ ನನ್ನ ಇಲಾಖೆ ವರದಿಯನ್ನು ನೀಡಿದ್ದೇನೆ ಅವರು ವರದಿ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಡಿ.4) ಹೈಕಮಾಂಡ್‌ನಿಂದ ಸಚಿವರ ವರದಿ ಕೇಳಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ ಎಲ್ಲಾ ಇಲಾಖೆಯ ಸಚಿವರ ವರದಿ ಕೇಳಿದೆ. ವರದಿ ಪಡೆಯುವ ಅಧಿಕಾರ ಹೈಕಮಾಂಡ್‌ಗೆ ಇದೆ. ವರದಿ ನೀಡಿದ ಮೇಲೆ ಹೈಕಮಾಂಡ್‌ ನಾಯಕರು ಅದನ್ನು ಪರಿಶೀಲಿಸುತ್ತಾರೆ. ಹೀಗಾಗಿ ಹೈಕಮಾಂಡ್‌ ವರದಿ ಕೇಳಿರೋದರಲ್ಲಿ ಏನು ತಪ್ಪಿಲ್ಲ ಎಂದಿದ್ದಾರೆ.

ಪಕ್ಷದಿಂದ ಕೊಟ್ಟಿರೋ ಭರವಸೆಗಳನ್ನು ಈಡೇರಿಸಲು ಆಯಾಯ ಇಲಾಖೆಯಲ್ಲಿ ಜವಾಬ್ದಾರಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಶಾಸಕರಿಗೆ ಸಚಿವ ಸ್ಥಾನ ನೀಡಿರವುದು. ಅದನ್ನು ಬಿಟ್ಟು ಸಚಿವರು ಕಾರಿನಲ್ಲಿ ಓಡಾಡಿಕೊಂಡು ಇರುವುದಕ್ಕೆ ಅಲ್ಲ. ಕಾಂಗ್ರೆಸ್‌ ಪಕ್ಷದ ಹೆಸರು, ವರ್ಚಸ್ಸು ವೃದ್ದಿ ಮಾಡೋ ಜವಾಬ್ದಾರಿ ಶಾಸಕರು ಹಾಗೂ ಮಂತ್ರಿಗಳ ಮೇಲಿದೆ.ನಮಗೆ ನೀಡಿರುವ ಸಚಿವ ಸ್ಥಾನದ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಿದ್ದಾರಾ ಅಥವಾ ಇಲ್ಲವಾ ಎಂದು ತಿಳಿಯಲು ವರದಿ ಕೇಳಿದ್ದಾರೆ ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

52 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

54 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

55 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

57 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago