small food processing enterprises to be established in the state Chaluvarayaswamy
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2026-27ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ. ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು, ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆಗೆ ರೂ. 8373 ಕೋಟಿ ಮೀಸಲಿಡಲಾಗಿದ್ದು, ಬಡವರು ಜನಸಾಮಾನ್ಯರಿಗೆ ಇನ್ನಷ್ಟು ಶಕ್ತಿ ತುಂಬುವಂತಹ ಅತ್ಯಂತ ಕಡಿಮೆ ತೆರಿಗೆಯ ಬಜೆಟ್ ಇದಾಗಿದೆ. ಶಿಕ್ಷಣ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ವಸತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಅನುದಾನ ಮೀಸಲಿರಿಸುವುದು ಸ್ವಾಗತಾರ್ಹ. ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಶೇಕಡಾ 13ರಷ್ಟು ಅನುದಾನ ಮೀಸಲಿರಿಸಿದೆ. ಎಲ್ಲಾ ಸಮಾಜಕ್ಕೂ ಬದುಕಿನ ಉನ್ನತೀಕರಣಕ್ಕೆ ಬೇಕಾಗುವಂತಹ ನೆರವು ಮತ್ತು ಪ್ರೋತ್ಸಾಹವನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಮಂಡಿಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…