ರಾಜ್ಯ

ಅಕ್ಟೋಬರ್.‌16ರಂದು ಬಳ್ಳಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಆಗಮನ

ಬಳ್ಳಾರಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇದೇ ಅಕ್ಟೋಬರ್.‌16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 1.45ಕ್ಕೆ ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‌ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಕೊಂಚಿಕೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.45ಕ್ಕೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಬ್ಯಾಂಕ್‌ನ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿರುವ ನಿರ್ಮಲಾ ಸೀತಾರಾಮನ್‌ ಅವರು, ಅಕ್ಟೋಬರ್.17ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

19 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

47 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago