Mysore
21
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

CM will resolve the MLAs' dissatisfaction: Minister G. Parameshwara

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ ಹಿಂದೆ ಅವರು ದುಬೈನಿಂದ ಬಂದಿದ್ದರು. 20 ನಿಮಿಷ ಬರ್ತೀನಿ ಎಂದು ಚೇಂಬರ್‌ಗೆ ಹೋಗಿ ಬಾಗಿಲು ಹಾಕಿಕೊಂಡವರು ಬಾಗಿಲು ತೆರೆದಿಲ್ಲ. ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿಸಿದರು.

ಸಿ.ಜೆ.ರಾಯ್‌ ಅವರ ಕಂಪನಿ ಮೇಲೆ ಡಿಸೆಂಬರ್‌ನಲ್ಲಿ ಐಟಿ ದಾಳಿ ನಡೆದಿತ್ತು. ರಾಯ್‌ ದುಬೈನಿಂದ ಬೆಂಗಳೂರಿಗೆ ಮೂರು ದಿನಗಳ ಹಿಂದೆ ಬಂದಿದ್ದರು. ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದರು. 20 ನಿಮಿಷ ಬರುತ್ತೇನೆ ಎಂದು ರಾಯ್‌ ಅವರ ಚೇಂಬರ್‌ಗೆ ಹೋಗಿದ್ದಾರೆ. 20 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡವರು ಹೊರಗೆ ಬಂದಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

 

 

Tags:
error: Content is protected !!