ರಾಜ್ಯ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಶಿವಾನಂದ ಪಾಟೀಲ್ ಅವರ ಜೊತೆ ನಿನ್ನೆ ಕೂಡ ತಾವು ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದೇನೆ. ಕಬ್ಬು ಬೆಲೆ ನಿಯಂತ್ರಣ ಅಥವಾ ದರ ನಿಗದಿಗೆ ಸಂಬಂಧಪಟ್ಟಂತೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು. ರೈತರ ಪ್ರತಿಭಟನೆ ಮುಂದುವರೆದರೆ ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಸೇರಿ ಸಕ್ಕರೆ ಕಾರ್ಖಾನೆಗಳ ಬಗ್ಗೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ. ನಿನ್ನೆ ಕಬ್ಬು ಬೆಳೆಗಾರರೊಬ್ಬರು ವಿಷ ಕುಡಿಯಲು ಪ್ರಯತ್ನಿಸಿದರು. ಪೊಲೀಸರು ತಕ್ಷಣವೇ ಮಧ್ಯ ಪ್ರವೇಶಿಸಿ ರಕ್ಷಿಸಿದ್ದಾರೆ. ಮುಂದೆ? ಈ ರೀತಿ ಘಟನೆಗಳಾಗುವುದು ಸವಾಲಿನ ಪರಿಸ್ಥಿತಿಯನ್ನು ನಿರ್ಮಿಸಲಿದೆ ಎಂದರು.

ಬಿಜೆಪಿಯವರು ಇಂತಹ ಪರಿಸ್ಥಿತಿಗಾಗಿಯೇ ಕಾಯುತ್ತಿರುತ್ತಾರೆ. ಹೀಗಾಗಿ ಅವರು ರಾಜಕಾರಣ ಮಾಡುವುದು ಸಹಜ. ಆದರೆ ಅವರು ಅಧಿಕಾರದಲ್ಲಿದ್ದಾಗ ಯಾವ ಪರಿಸ್ಥಿತಿ ಇತ್ತು ಎಂಬುದನ್ನು ಸರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇದನ್ನು ಓದಿ: ಕುರ್ಚಿ ಬಡಿದಾಟ ಬದಿಗೊತ್ತಿ, ಕಬ್ಬು ಬೆಳೆಗಾರದ ಸಮಸ್ಯೆ ಬಗೆಹರಿಸಿ: ಬಿ.ವೈ.ವಿಜಯೇಂದ್ರ

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಮನೆಗೆಲಸದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಮ ಗಮನಕ್ಕೆ ಬಂದಿದೆ. ನಿಖರವಾದ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‍ರಚನೆ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಗಳನ್ನು ನಾವು ಅನುಸರಿಸುತ್ತೇವೆ. ಒಂದು ವೇಳೆ ಧಿಕ್ಕರಿಸಿದರೆ ಅಂಥವರ ವಿರುದ್ಧ ಕ್ರಮಗಳಾದ ಉದಾಹರಣೆಗಳಿವೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರಲ್ಲೂ ಕೂಡ ಹೈಕಮಾಂಡ್ ಸಂಸ್ಕೃತಿ ತೀವ್ರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಮರ್ಥನೀಯ ಎಂದರು.

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಮುಖ್ಯಮಂತ್ರಿ ಅವರು ಊಟಕ್ಕೆ ಸೇರುವುದರಲ್ಲಿ ವಿಶೇಷವೇನಿಲ್ಲ. ಮುಖ್ಯಮಂತ್ರಿ ಅವರು ತುಮಕೂರಿಗೆ ಬಂದಾಗ ರಾಜಣ್ಣ ಅವರ ಮನೆಯಲ್ಲಿ ಊಟ ಮಾಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ನಾವು ಕೂಡ ಊಟಕ್ಕೆ ಹೋಗುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

11 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

12 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago