ರಾಜ್ಯ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ: ಸಚಿವ ಪರಮೇಶ್ವರ್‌

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರಾಗಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಶಿವಾನಂದ ಪಾಟೀಲ್ ಅವರ ಜೊತೆ ನಿನ್ನೆ ಕೂಡ ತಾವು ಚರ್ಚೆ ನಡೆಸಿದ್ದು, ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದೇನೆ. ಕಬ್ಬು ಬೆಲೆ ನಿಯಂತ್ರಣ ಅಥವಾ ದರ ನಿಗದಿಗೆ ಸಂಬಂಧಪಟ್ಟಂತೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು. ರೈತರ ಪ್ರತಿಭಟನೆ ಮುಂದುವರೆದರೆ ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಕಷ್ಟವಾಗುತ್ತದೆ ಎಂದಿದ್ದಾರೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಸೇರಿ ಸಕ್ಕರೆ ಕಾರ್ಖಾನೆಗಳ ಬಗ್ಗೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ. ನಿನ್ನೆ ಕಬ್ಬು ಬೆಳೆಗಾರರೊಬ್ಬರು ವಿಷ ಕುಡಿಯಲು ಪ್ರಯತ್ನಿಸಿದರು. ಪೊಲೀಸರು ತಕ್ಷಣವೇ ಮಧ್ಯ ಪ್ರವೇಶಿಸಿ ರಕ್ಷಿಸಿದ್ದಾರೆ. ಮುಂದೆ? ಈ ರೀತಿ ಘಟನೆಗಳಾಗುವುದು ಸವಾಲಿನ ಪರಿಸ್ಥಿತಿಯನ್ನು ನಿರ್ಮಿಸಲಿದೆ ಎಂದರು.

ಬಿಜೆಪಿಯವರು ಇಂತಹ ಪರಿಸ್ಥಿತಿಗಾಗಿಯೇ ಕಾಯುತ್ತಿರುತ್ತಾರೆ. ಹೀಗಾಗಿ ಅವರು ರಾಜಕಾರಣ ಮಾಡುವುದು ಸಹಜ. ಆದರೆ ಅವರು ಅಧಿಕಾರದಲ್ಲಿದ್ದಾಗ ಯಾವ ಪರಿಸ್ಥಿತಿ ಇತ್ತು ಎಂಬುದನ್ನು ಸರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇದನ್ನು ಓದಿ: ಕುರ್ಚಿ ಬಡಿದಾಟ ಬದಿಗೊತ್ತಿ, ಕಬ್ಬು ಬೆಳೆಗಾರದ ಸಮಸ್ಯೆ ಬಗೆಹರಿಸಿ: ಬಿ.ವೈ.ವಿಜಯೇಂದ್ರ

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಮನೆಗೆಲಸದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಮ ಗಮನಕ್ಕೆ ಬಂದಿದೆ. ನಿಖರವಾದ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್‍ರಚನೆ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ತೀರ್ಮಾನವೇ ಅಂತಿಮ. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಗಳನ್ನು ನಾವು ಅನುಸರಿಸುತ್ತೇವೆ. ಒಂದು ವೇಳೆ ಧಿಕ್ಕರಿಸಿದರೆ ಅಂಥವರ ವಿರುದ್ಧ ಕ್ರಮಗಳಾದ ಉದಾಹರಣೆಗಳಿವೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಸಂಸ್ಕೃತಿಯ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರಲ್ಲೂ ಕೂಡ ಹೈಕಮಾಂಡ್ ಸಂಸ್ಕೃತಿ ತೀವ್ರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಮರ್ಥನೀಯ ಎಂದರು.

ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಮನೆಯಲ್ಲಿ ಮುಖ್ಯಮಂತ್ರಿ ಅವರು ಊಟಕ್ಕೆ ಸೇರುವುದರಲ್ಲಿ ವಿಶೇಷವೇನಿಲ್ಲ. ಮುಖ್ಯಮಂತ್ರಿ ಅವರು ತುಮಕೂರಿಗೆ ಬಂದಾಗ ರಾಜಣ್ಣ ಅವರ ಮನೆಯಲ್ಲಿ ಊಟ ಮಾಡುವುದು ಮೊದಲಿನಿಂದಲೂ ಸಂಪ್ರದಾಯವಾಗಿದೆ. ನಾವು ಕೂಡ ಊಟಕ್ಕೆ ಹೋಗುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago