ಬೆಂಗಳೂರು: ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ 2022ರಲ್ಲಿ ಕೇಂದ್ರ ಒಂದು ರೀತಿಯಲ್ಲಿ ಅನುಮತಿ ನೀಡಿತ್ತು. ಆ ಮೇಲೆ ಸಂಘರ್ಷ ಪ್ರಾರಂಭ ಆಗಿದೆ. ಇದಕ್ಕೆ ನಿರ್ಬಂಧ ಹೇರಬಾರದು. ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಮೇಕೆದಾಟು ಯೋಜನೆ ಬೆಂಗಳೂರಿಗೆ ಕುಡಿಯುವ ನೀರು ಯೋಜನೆ. ಮೇಕೆದಾಟು ಯೋಜನೆಗೂ ಕೇಂದ್ರ ಅನುಮತಿ ಕೊಡಬೇಕು ಎಂದು ಆಗ್ರಹಿಸಿದರು.





