ಬೆಂಗಳೂರು: ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಯುವ ಗುತ್ತಿಗೆದಾರ ಸಚಿನ್ ಡಿಸೆಂಬರ್.26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ಸಾವಿಗೆಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ ಸೇರಿದಂತೆ ಎಂಟು ಜನರು ಕಾರಣ ಎಂದು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದರು.
ಜೊತೆಗೆ ಬಿಜೆಪಿಯ ನಾಯಕರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದ ಬಳಿಕ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಬಿಜೆಪಿಯ ಕಲಬುರಗಿ ಮತ್ತು ಬೀದರ್ ನಿಯೋಗ ಸಚಿನ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿತ್ತು. ಇದರ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಚಿವ ಪ್ರಿಯಾಂಕ್ ಖರ್ಗೆ ಈಗ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಸಿಎಂ ಸಿದ್ದುಗೆ ಮನವಿ ಮಾಡಿದ್ದಾರೆ.
ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…