ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್ ಅಭಿಯಾನಕ್ಕೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವ ಅಭಿಯಾನವನ್ನಾದರೂ ಮಾಡಿಕೊಳ್ಳಲಿ ಅಥವಾ ಬಟ್ಟೆಯನ್ನಾದರೂ ಹರಿದುಕೊಳ್ಳಲಿ. ಮೊದಲು ದಾಖಲೆಗಳನ್ನಿಟ್ಟುಕೊಂಡು ಮಾತನಾಡಬೇಕು. ಲಾಜಿಕ್ ಇದ್ದರೆ ನಾವು ಉತ್ತರ ಕೊಡಬಹುದು. ಆದರೆ ಪೋಸ್ಟರ್ ಅಭಿಯಾನ ಮಾಡುತ್ತಿರುವುದರಲ್ಲಿ ಲಾಜಿಕ್ ಇಲ್ಲ. ನಮ್ಮ ಸಿದ್ಧಾಂತವೇ ಬೇರೆ, ಅವರ ಸಿದ್ಧಾಂತವೇ ಬೇರೆ. ನಾವು ಮೊದಲಿನಿಂದಲೂ ಬಿಜೆಪಿ ಸಿದ್ಧಾಂತದ ವಿರುದ್ಧವೇ ಇದ್ದೇವೆ. ಅದಕ್ಕೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೇಸ್ ಏನಾಯ್ತು?, ಅಶೋಕ್ ಕೇಸ್ ಏನಾಯ್ತು? ಅವರ ಕೇಸ್ ವಿಚಾರ ಮಾಧ್ಯಮದಲ್ಲೇ ಮಾಧ್ಯಮದಲ್ಲೇ ಪ್ರಸಾರವಾಯಿತು. ಬಿಜೆಪಿಯವರು ಕಲಬುರ್ಗಿಗೆ ಬರಲು ಎಳನೀರು, ಟೀ ಹಾಗೂ ಕಾಫಿ ಕೊಡುತ್ತೇವೆ. ಗುತ್ತಿಗೆದಾರ ಸಚಿನ್ ಕುಟುಂಬ ನ್ಯಾಯ ಒದಗಿಸಬೇಲಕು ಎಂದು ಹೇಳಿದೆ. ಹೀಗಾಗಿ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…