ರಾಜ್ಯ

ಬಿಜೆಪಿ ನಾಯಕರ ಪೋಸ್ಟರ್‌ ಅಭಿಯಾನಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್‌ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್‌ ಅಭಿಯಾನಕ್ಕೆ ಪ್ರಿಯಾಂಕ್‌ ತಿರುಗೇಟು ನೀಡಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವ ಅಭಿಯಾನವನ್ನಾದರೂ ಮಾಡಿಕೊಳ್ಳಲಿ ಅಥವಾ ಬಟ್ಟೆಯನ್ನಾದರೂ ಹರಿದುಕೊಳ್ಳಲಿ. ಮೊದಲು ದಾಖಲೆಗಳನ್ನಿಟ್ಟುಕೊಂಡು ಮಾತನಾಡಬೇಕು. ಲಾಜಿಕ್‌ ಇದ್ದರೆ ನಾವು ಉತ್ತರ ಕೊಡಬಹುದು. ಆದರೆ ಪೋಸ್ಟರ್‌ ಅಭಿಯಾನ ಮಾಡುತ್ತಿರುವುದರಲ್ಲಿ ಲಾಜಿಕ್‌ ಇಲ್ಲ. ನಮ್ಮ ಸಿದ್ಧಾಂತವೇ ಬೇರೆ, ಅವರ ಸಿದ್ಧಾಂತವೇ ಬೇರೆ. ನಾವು ಮೊದಲಿನಿಂದಲೂ ಬಿಜೆಪಿ ಸಿದ್ಧಾಂತದ ವಿರುದ್ಧವೇ ಇದ್ದೇವೆ. ಅದಕ್ಕೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕೇಸ್‌ ಏನಾಯ್ತು?, ಅಶೋಕ್‌ ಕೇಸ್‌ ಏನಾಯ್ತು? ಅವರ ಕೇಸ್‌ ವಿಚಾರ ಮಾಧ್ಯಮದಲ್ಲೇ ಮಾಧ್ಯಮದಲ್ಲೇ ಪ್ರಸಾರವಾಯಿತು. ಬಿಜೆಪಿಯವರು ಕಲಬುರ್ಗಿಗೆ ಬರಲು ಎಳನೀರು, ಟೀ ಹಾಗೂ ಕಾಫಿ ಕೊಡುತ್ತೇವೆ. ಗುತ್ತಿಗೆದಾರ ಸಚಿನ್‌ ಕುಟುಂಬ ನ್ಯಾಯ ಒದಗಿಸಬೇಲಕು ಎಂದು ಹೇಳಿದೆ. ಹೀಗಾಗಿ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

9 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

10 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

10 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

11 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

12 hours ago