ರಾಜ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ಸುದ್ದಿಗೋಷ್ಠಿಯನ್ನೇ ನಡೆಸಿಲ್ಲ. ಹೀಗಿರುವಾಗ ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ.? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾನು ಎಂದಿಗೂ ಯಾರನ್ನೂ ವೈಯಕ್ತಿಕವಾಗಿ ಟಾರ್ಗೆಟ್‌ ಮಾಡಿ ಮಾತನಾಡಿಲ್ಲ. ಯಾರನ್ನೂ ಕೂಡ ನಿಂದನೆ ಮಾಡಿಲ್ಲ ಎಂದರು.

ನಾನು ಯಾವ ಸಂದರ್ಭ ಬಂದರೂ ದಾಖಲೆ ಮುಂದಿಟ್ಟುಕೊಂಡು ಮಾತನಾಡಿದ್ದೇನೆ. ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಆದರೆ ನಾನು ನೇರವಾಗಿ ಮಾತನಾಡುವ ಕಾರಣಕ್ಕೆ ಬಿಜೆಪಿಯವರಿಗೆ ತುಂಬಾ ತೊಂದರೆಯಾಗುತ್ತಿದೆ. ಏಕೆಂದರೆ ಅವರು ಕಾಂಗ್ರೆಸ್‌ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದೇವೆ ಎಂದು ಆರ್‌ಎಸ್‌ಎಸ್‌ನವರಿಗೆ ರಿಪೋರ್ಟ್‌ ಕಾರ್ಡ್‌ ಕೊಡಬೇಕಿರುತ್ತದೆ. ಅವರು ದಾಖಲೆ ಇಟ್ಟುಕೊಂಡು ಎಂದಿಗೂ ಮಾತನಾಡಿಲ್ಲ. ನನ್ನ ದಾಖಲೆಗಳನ್ನು ತಿರಸ್ಕರಿಸಿಯೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಪ್ರಧಾನಿ ಮೋದಿ ಅವರು 11 ವರ್ಷಗಳಲ್ಲಿ ಒಂದೂ ಸುದ್ದಿಗೋಷ್ಠಿಯನ್ನು ನಡೆಸಿಲ್ಲ. ಇನ್ನು ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ? ಮನ್‌ ಕಿ ಬಾತ್‌, ಸಂಸತ್‌ ಅಥವಾ ಕೆಂಪುಕೋಟೆ ಭಾಷಣದ ಹೊರತಾಗಿ ಯಾವುದರಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago