ಬೆಂಗಳೂರು: ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ಸುದ್ದಿಗೋಷ್ಠಿಯನ್ನೇ ನಡೆಸಿಲ್ಲ. ಹೀಗಿರುವಾಗ ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ.? ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಎಂದಿಗೂ ಯಾರನ್ನೂ ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ಮಾತನಾಡಿಲ್ಲ. ಯಾರನ್ನೂ ಕೂಡ ನಿಂದನೆ ಮಾಡಿಲ್ಲ ಎಂದರು.
ನಾನು ಯಾವ ಸಂದರ್ಭ ಬಂದರೂ ದಾಖಲೆ ಮುಂದಿಟ್ಟುಕೊಂಡು ಮಾತನಾಡಿದ್ದೇನೆ. ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಆದರೆ ನಾನು ನೇರವಾಗಿ ಮಾತನಾಡುವ ಕಾರಣಕ್ಕೆ ಬಿಜೆಪಿಯವರಿಗೆ ತುಂಬಾ ತೊಂದರೆಯಾಗುತ್ತಿದೆ. ಏಕೆಂದರೆ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ್ದೇವೆ ಎಂದು ಆರ್ಎಸ್ಎಸ್ನವರಿಗೆ ರಿಪೋರ್ಟ್ ಕಾರ್ಡ್ ಕೊಡಬೇಕಿರುತ್ತದೆ. ಅವರು ದಾಖಲೆ ಇಟ್ಟುಕೊಂಡು ಎಂದಿಗೂ ಮಾತನಾಡಿಲ್ಲ. ನನ್ನ ದಾಖಲೆಗಳನ್ನು ತಿರಸ್ಕರಿಸಿಯೂ ಇಲ್ಲ ಎಂದು ಕಿಡಿಕಾರಿದರು.
ಇನ್ನು ಪ್ರಧಾನಿ ಮೋದಿ ಅವರು 11 ವರ್ಷಗಳಲ್ಲಿ ಒಂದೂ ಸುದ್ದಿಗೋಷ್ಠಿಯನ್ನು ನಡೆಸಿಲ್ಲ. ಇನ್ನು ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ? ಮನ್ ಕಿ ಬಾತ್, ಸಂಸತ್ ಅಥವಾ ಕೆಂಪುಕೋಟೆ ಭಾಷಣದ ಹೊರತಾಗಿ ಯಾವುದರಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…