ರಾಜ್ಯ

ಗ್ರಾಮೀಣ ಜನರಿಗೆ ಮಾಹಿತಿ ನೀಡಲು ಗ್ರಾಮದನಿ ಪಾಡ್‌ಕಾಸ್ಟ್‌  ಲೋಕಾರ್ಪಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕದ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ  ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್‌ಕಾಸ್ಟ್‌ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು.
ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು ಎಂದು ಹೇಳಿದ ಸಚಿವರು ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು,  ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ  ಶಕ್ತಿಯುತ ಅರಿವಿನ ಮಾಧ್ಯಮವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು ಇದು ಸೂಕ್ತ ವೇದಿಕೆಯಾಗಲಿದೆ; ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಒಟ್ಟಾರೆ ಪಂಚಾಯತ್‌ ವ್ಯವಸ್ಥೆಯ  ಡಿಜಿಟಲೀಕರಣ ಕುರಿತ ಮಾರ್ಗಸೂಚಿಗಳು, ಪಂಚತಂತ್ರ 2.0 ತಂತ್ರಾಂಶದಲ್ಲಿ ಇಂದೀಕರಿಸುವ ವಿಧಾನ ಮುಂತಾದ ಹಲವು ಉಪಯುಕ್ತ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳನ್ನು ಇಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
‘ಗ್ರಾಮದನಿ’ ಪಾಡ್‌ಕಾಸ್ಟ್‌ ಸರಣಿಯು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಪ್ರಸಾರ ಮಾಡುವ ಮತ್ತು ಆಡಳಿತ ಸುಧಾರಣೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ಎಂದೂ ಸಚಿವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಡಿ.ರಣದೀಪ್‌, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಇದ್ದರು.
ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

5 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

8 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

8 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

8 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

9 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago