ರಾಜ್ಯ

ಗ್ರಾಮೀಣ ಜನರಿಗೆ ಮಾಹಿತಿ ನೀಡಲು ಗ್ರಾಮದನಿ ಪಾಡ್‌ಕಾಸ್ಟ್‌  ಲೋಕಾರ್ಪಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕರ್ನಾಟಕದ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು (ANSSIRDPR) ಹೊಸಹೆಜ್ಜೆ ಇಡುವುದರೊಂದಿಗೆ ಆರಂಭಿಸಿರುವ  ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪಲಿರುವ ‘ಗ್ರಾಮದನಿ’ ಸರಣಿ ಪಾಡ್‌ಕಾಸ್ಟ್‌ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು.
ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು ಎಂದು ಹೇಳಿದ ಸಚಿವರು ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು,  ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ  ಶಕ್ತಿಯುತ ಅರಿವಿನ ಮಾಧ್ಯಮವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು ಇದು ಸೂಕ್ತ ವೇದಿಕೆಯಾಗಲಿದೆ; ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳಿಗೆ ಸಂಬಂಧಿಸಿದ ನಿಯಮಗಳು, ಒಟ್ಟಾರೆ ಪಂಚಾಯತ್‌ ವ್ಯವಸ್ಥೆಯ  ಡಿಜಿಟಲೀಕರಣ ಕುರಿತ ಮಾರ್ಗಸೂಚಿಗಳು, ಪಂಚತಂತ್ರ 2.0 ತಂತ್ರಾಂಶದಲ್ಲಿ ಇಂದೀಕರಿಸುವ ವಿಧಾನ ಮುಂತಾದ ಹಲವು ಉಪಯುಕ್ತ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳನ್ನು ಇಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
‘ಗ್ರಾಮದನಿ’ ಪಾಡ್‌ಕಾಸ್ಟ್‌ ಸರಣಿಯು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಪ್ರಸಾರ ಮಾಡುವ ಮತ್ತು ಆಡಳಿತ ಸುಧಾರಣೆಗೆ ಸಹಾಯ ಮಾಡುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ಎಂದೂ ಸಚಿವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಡಿ.ರಣದೀಪ್‌, ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಇದ್ದರು.
ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

1 hour ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

4 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago