ರಾಜ್ಯ

ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುತ್ತಾರೆ. ಸ್ವತಃ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಅದು ಬಿಜೆಪಿಯವರಿಗೆ ಮರೆತು ಹೋಗಿರಬಹುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.6) ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಬಿಜೆಪಿ ಆಗ್ರಹದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹನಿಟ್ರ್ಯಾಪ್‌ ವಿಚಾರ ಸೇರಿದಂತೆ ಪ್ರತಿಯೊಂದು ಪ್ರಕರಣವನ್ನು ಸಿಬಿಐ ಕೊಡಿ ಎಂದು ಹೇಳುತ್ತಾರೆ. ಅಂತೆಯೇ ಇದನ್ನು ಸಿಬಿಐಗೆ ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ ಸಿಬಿಐ ಅವರೇ ನೀವು ನಮಗೆ ಕೇಸ್ ಕೊಡಬೇಡಿ ಎಂದು ಪತ್ರ ಬರೆದಿದ್ದಾರೆ. ಒಂದು ವೇಳೆ ನೀವೂ ನಮಗೆ ಕೇಸ್ ನೀಡಿದರೆ ಅದಕ್ಕೆ ಸಿಬ್ಬಂದಿ ಒದಗಿಸಬೇಕು. ಸಾರಿಗೆ ವ್ಯವಸ್ಥೆ ಮಾಡಿ ಅದರ ಶುಲ್ಕವನ್ನು ನೀವೇ ಪಾವತಿಸಬೇಕು. ಅಲ್ಲದೇ ನಾವು ಸ್ವತಂತ್ರವಾಗಿ ತನಿಖೆ ಮಾಡಲು ಆಗುವುದಿಲ್ಲ, ಕರ್ನಾಟಕ ಪೊಲೀಸರ ಸಹಾಯ ಪಡೆದೇ ತನಿಖೆ ನಡೆಸುತ್ತೇವೆ. ಎಂದು ಬರೆದಿದ್ದಾರೆ. ಅದನ್ನು ಬಿಜೆಪಿಯವರು ಮರೆತುಬಿಟ್ಟಿದ್ದಾರೆಂದು ಕಾಣುತ್ತದೆ ಹಾಗಾಗಿ ಅವರಿಗೆ ಪತ್ರ ತಲುಪಿಸಿ ಕೊಡುತ್ತೇನೆ ಎಂದು ಟಾಂಗ್‌ ನೀಡಿದ್ದಾರೆ.

ಬಿಜೆಪಿಯವರಿಗೆ ಸಾವಿನ ಮನೆಯಲ್ಲಿ ರಾಜಕೀಯ ಮಾಡಿ ಅಭ್ಯಾಸವಾಗಿದೆ. ಅವರು ಪ್ರಕರಣದ ಸತ್ಯಾಂಶವನ್ನು ನೋಡುವುದಿಲ್ಲ. ಸುಮ್ಮನೆ ದುರುದ್ದೇಶದಿಂದ ರಾಜಕೀಯ ಮಾಡುತ್ತಾರೆ. ಇದೇ ರಾಜಕೀಯವನ್ನು ಕಲಬುರ್ಗಿಯಲ್ಲಿ ಮಾಡಿದ್ದಾರೆ. ವಿನಯ್‌ ಡೆತ್‌ನೋಟ್‌ನಲ್ಲಿ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಹೆಸರಿದೆಯಾ? ಅದು ವಾಟ್ಸ್‌ಆಪ್‌ ಸಂದೇಶನಾ? ಇವರು ಸುಮ್ಮನೆ ಹೈಕಮಾಂಡ್ ಮನವೊಲಿಸಲು ಹಾಗೂ ಇವರ ಅಸ್ತಿತ್ವ ತೋರಿಸಿಕೊಳ್ಳಲು ಮಾಡುತ್ತಿದ್ದಾರೆ. ಇಲ್ಲಿಯವರೆಗೂ ಯಾವುದೇ ಕೇಸ್ ಸಾಬೀತಾಗಿಲ್ಲ. ಯಾವುದಾದರೂ ಒಂದು ಕೇಸ್ ಅನ್ನು ಸಾಬೀತು ಮಾಡಿದ್ದಾರಾ? ಬಿಜೆಪಿಯವರು ಯಾರು ಕಾಳಜಿ ವಹಿಸಿದ್ದಾರೆ. ನೂರಾರು ಕಾರ್ಯಕರ್ತರ ಪಟ್ಟಿಗೆ ಈ ಹೆಸರು ಒಂದು ಸೇರ್ಪಡೆಯಾಗಿದೆ. ಬಿಜೆಪಿಯವರ ರಾಜಕೀಯ ಅಸ್ತಿತ್ವವೇ ಇಷ್ಟು ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

35 mins ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

5 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

6 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

10 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

10 hours ago