ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸುವುದು ಹಾಗೂ ಟ್ರೋಲ್ ಮಾಡುವುದು ಖಂಡನೀಯ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಪುಟ ಸಹೋದ್ಯೋಗಿ, ಮಿತ್ರ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸುವುದು ಮತ್ತು ಅವರ ಕುಟುಂಬಸ್ಥರ ಮೇಲೆ ಅಸಭ್ಯವಾಗಿ ದಾಳಿ ನಡೆಸುತ್ತಿರುವುದು ಖಂಡನೀಯ. ಅವರ ಜೊತೆಗೆ ನಾವೆಲ್ಲರೂ ಇದ್ದೇವೆ. ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ನಡೆಸುವ, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಯಾವುದೇ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳಲು ಅವಕಾಶ ಇರಬಾರದು.
ಇದನ್ನು ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್
ಬಿಜೆಪಿ ಪರಿವಾರದವರು ಸಾರ್ವಜನಿಕ ವಾಗ್ವಾದದ ಮಟ್ಟವನ್ನು ಬಹಳ ಕೀಳುಮಟ್ಟಕ್ಕೆ ಇಳಿಸಿದ್ದಾರೆ. ಅದರ ಭಾಗವಾಗಿಯೇ ಪ್ರಿಯಾಂಕ್ ಖರ್ಗೆ ಅವರನ್ನು ಫೋನಿನ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕುವುದು, ನಿಂದಿಸುವುದು ಹಾಗೂ ಟ್ರೋಲ್ ಮಾಡುವುದು ಸಭ್ಯತೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…