ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿರೋದು ಪಾಪ ಅಲ್ವಾ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಕಿಡಿಕಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದು ಸರಿಯಾಗಿಯೇ ಇದೆ ಎಂದು ಬ್ಯಾಟ್ ಬೀಸಿದರು.
ಇನ್ನು ಬಿಜೆಪಿಯವರು ದೇಶದ ಸಾಲದ ಬಗ್ಗೆ ಯಾಕೆ ಮಾತನಾಡಲ್ಲ. ನಾನೊಬ್ಬ ಹಿಂದೂ ಇದೀನಿ. ಅಮಿತ್ ಶಾ ಹಾಗೋ ಮೋದಿ ಪಾಪ ಎಲ್ಲಿ ಹೋದ್ರೂ ತೊಳೆಯೋಕೆ ಆಗಲ್ಲ. ಲೋಕಪಾಲ್ಗೆ ಗೌರವ ಕೊಟ್ಟಂತೆ, ನಾವು ಲೋಕಾಯುಕ್ತ ಸಂಸ್ಥೆಯನ್ನು ನಂಬುತ್ತೇವೆ. ಇದನು ಯುವ ಜನತೆ ಕೂಡ ಅರ್ಥ ಮಾಡಿಕೊಳ್ಳಬೇಕು. ದೇಶ ಬಿಜೆಪಿ-ಕಾಂಗ್ರೆಸ್ನವರ ಸ್ವತ್ತಲ್ಲ ಎಂದರು.
ಇನ್ನು ಕೇಂದ್ರ ಬಜೆಟ್ ಕುರಿತು ಮಾತನಾಡಿದ ಅವರು, ಕೇಂದ್ರ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ. ಎಲ್ಲಾ ಬರೀ ಡಬ್ಬ ಎಂದು ವ್ಯಂಗ್ಯವಾಡಿದರು.
ಇನ್ನು ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ಅವರು, ರಾಮುಲು ನನಗೆ ವಂಡರ್ ಫುಲ್ ಫ್ರೆಂಡ್. ಅವರು ಕಾಂಗ್ರೆಸ್ಗೆ ಬಂದರೆ ಸ್ವಾಗತ. ನಮ್ಮ ಪಕ್ಷ ಡಬಲ್ ಡೆಕ್ಕರ್ ಬಸ್, ಯಾರಾದರೂ ನಮ್ಮ ಪಕ್ಷಕ್ಕೆ ಬರಬಹುದು ಎಂದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…