ಬೆಂಗಳೂರು : ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ವೊಂದನ್ನು ಖರೀದಿಸಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ಹೊಸ ಹೆಲಿಕಾಪ್ಟರ್ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್ನಲ್ಲಿ ಫೊಟೊ ಹಂಚಿಕೊಂಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ಹೊಸ ಹೆಲಿಕಾಪ್ಟರ್ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಲಿಕಾಪ್ಟರ್ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೆಲಿಕಾಪ್ಟರ್ನ ವಿಶೇಷತೆಗಳೇನು
ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…