ರಾಜ್ಯ

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಇಂದು ಕಲಬುರ್ಗಿಯ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆದ ಸಂವಾದದಲ್ಲಿ ಸಚಿವರು ಈ ಮಾತು ಹೇಳಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ತಜ್ಞರಾಗಿ ಕರ್ತವ್ಯ ನಿರ್ವಹಿಸಲು ಅತ್ಯಂತ ಕಡಿಮೆ ಅವಧಿ ಸಿಗುತ್ತದೆ ಇದನ್ನು ವಿಸ್ತರಿಸಬೇಕು ಎಂದು ಹಲವಾರು ವೈದ್ಯರು ಸಂವಾದದಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪರಿಣಿತಿ ಹೊಂದಿದ ವೈದ್ಯರನ್ನು ಉಳಿಸಿಕೊಳ್ಳುವ ಸಂಬಂಧ ನಿವೃತ್ತಿ ವಯಸ್ಸು ವಿಸ್ತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಜತೆಗೆ, ಕಲಬುರ್ಗಿ ಜಯದೇವ ಆಸ್ಪತ್ರೆಗೆ ರೊಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಹೆಚ್ಚುವರಿ ಹಣ ಮಂಜೂರು ಮಾಡಲಾಗುತ್ತದೆ. ಮಕ್ಕಳ ವಿಭಾಗಕ್ಕೆ ಶಸ್ತ್ರಚಿಕಿತ್ಸಾ ಘಟಕ, ಪ್ರತ್ಯೇಕ ಸಂಶೋಧನಾ ವಿಭಾಗ, ಆಸ್ಪತ್ರೆ ವೈದ್ಯಕೀಯ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

4 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

10 hours ago