ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.
ನಗರದಲ್ಲಿ ಇಂದು ಕಲಬುರ್ಗಿಯ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆದ ಸಂವಾದದಲ್ಲಿ ಸಚಿವರು ಈ ಮಾತು ಹೇಳಿದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ತಜ್ಞರಾಗಿ ಕರ್ತವ್ಯ ನಿರ್ವಹಿಸಲು ಅತ್ಯಂತ ಕಡಿಮೆ ಅವಧಿ ಸಿಗುತ್ತದೆ ಇದನ್ನು ವಿಸ್ತರಿಸಬೇಕು ಎಂದು ಹಲವಾರು ವೈದ್ಯರು ಸಂವಾದದಲ್ಲಿ ಪ್ರಸ್ತಾಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪರಿಣಿತಿ ಹೊಂದಿದ ವೈದ್ಯರನ್ನು ಉಳಿಸಿಕೊಳ್ಳುವ ಸಂಬಂಧ ನಿವೃತ್ತಿ ವಯಸ್ಸು ವಿಸ್ತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಜತೆಗೆ, ಕಲಬುರ್ಗಿ ಜಯದೇವ ಆಸ್ಪತ್ರೆಗೆ ರೊಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಹೆಚ್ಚುವರಿ ಹಣ ಮಂಜೂರು ಮಾಡಲಾಗುತ್ತದೆ. ಮಕ್ಕಳ ವಿಭಾಗಕ್ಕೆ ಶಸ್ತ್ರಚಿಕಿತ್ಸಾ ಘಟಕ, ಪ್ರತ್ಯೇಕ ಸಂಶೋಧನಾ ವಿಭಾಗ, ಆಸ್ಪತ್ರೆ ವೈದ್ಯಕೀಯ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…