ರಾಜ್ಯ

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಇಂದು ಕಲಬುರ್ಗಿಯ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆದ ಸಂವಾದದಲ್ಲಿ ಸಚಿವರು ಈ ಮಾತು ಹೇಳಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ತಜ್ಞರಾಗಿ ಕರ್ತವ್ಯ ನಿರ್ವಹಿಸಲು ಅತ್ಯಂತ ಕಡಿಮೆ ಅವಧಿ ಸಿಗುತ್ತದೆ ಇದನ್ನು ವಿಸ್ತರಿಸಬೇಕು ಎಂದು ಹಲವಾರು ವೈದ್ಯರು ಸಂವಾದದಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪರಿಣಿತಿ ಹೊಂದಿದ ವೈದ್ಯರನ್ನು ಉಳಿಸಿಕೊಳ್ಳುವ ಸಂಬಂಧ ನಿವೃತ್ತಿ ವಯಸ್ಸು ವಿಸ್ತರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪ್ರಸ್ತಾಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಜತೆಗೆ, ಕಲಬುರ್ಗಿ ಜಯದೇವ ಆಸ್ಪತ್ರೆಗೆ ರೊಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಹೆಚ್ಚುವರಿ ಹಣ ಮಂಜೂರು ಮಾಡಲಾಗುತ್ತದೆ. ಮಕ್ಕಳ ವಿಭಾಗಕ್ಕೆ ಶಸ್ತ್ರಚಿಕಿತ್ಸಾ ಘಟಕ, ಪ್ರತ್ಯೇಕ ಸಂಶೋಧನಾ ವಿಭಾಗ, ಆಸ್ಪತ್ರೆ ವೈದ್ಯಕೀಯ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago