Mysore
28
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಮೋದಿ-ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು: ಸಚಿವ ತಂಗಡಗಿ

ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್‌ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ.

ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ ಕಾರಟಗಿಯಲ್ಲಿ ನಡೆದ ಕಾಂಗೆಸ್‌ ಕಾರ್ಯಕರ್ತರ ಸಭೆಯಲ್ಲಿ ಕನ್ನಡ ಸಂಸ್ಕೃತಿ ಸಚಿವ ಶಿವರಾಜ ತಂಗಟಗಿ ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎಂದು ಮೋದಿ ಹೇಳಿದರು. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಈ ಹೇಳಿಕೆ ನೀಡಿದ್ದಾರೆ.

ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಮೋದಿ ಅವರ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದು ಕೂಗಿದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ಸಚಿವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ಬಂದಿದೆ. ಮತ್ತೆ ಬಿಜೆಪಿಯವರು ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಕೇಳಲು ನಾಚಿಕೆ ಆಗಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Tags:
error: Content is protected !!