ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಇದನ್ನೂ ಓದಿ:-ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ
ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.
ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೂಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…