ರಾಜ್ಯ

ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

ಇದನ್ನೂ ಓದಿ:-ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ

ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.

ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೂಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago