ಬೆಂಗಳೂರು: ಕನ್ನಡದ ಖ್ಯಾತ ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಮೊಗಳ್ಳಿ ಗಣೇಶ ಅವರ ಕೊಡುಗೆ ಗಮನಾರ್ಹ. ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.
ಇದನ್ನೂ ಓದಿ:-ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ
ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಅವರ ಬೃಹತ್ ಕಾದಂಬರಿ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ವಿಶ್ಲೇಷಣೆ’ ಎಂಬ ಅಂಕಣ ಕೂಡಾ ಜನಪ್ರಿಯ. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ. ಗಣೇಶ್ ಇತರ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದರೆ, ಅವರ ಅನೇಕ ಬರಹಗಳು ಇತರ ಭಾಷೆಗಳಿಗೆ ಅನುವಾದಗೊಂಡಿದೆ.
ಮೊಗಳ್ಳಿ ಗಣೇಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ವರನಟ ಡಾ.ರಾಜಕುಮಾರ್ ಹೆಸರಿನಲ್ಲಿರುವ ಅಧ್ಯಯನ ಪೀಠಕ್ಕೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಮೂಗಳ್ಳಿ ಗಣೇಶ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಒಬ್ಬ ಅತ್ಯುತ್ತಮ ಬರಹಗಾರನನ್ನು ಕಳೆದುಕೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…