Mysore
32
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ ಡಿ.ಸುಧಾಕರ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್‌ ಪ್ಲಾಂಟ್‌ ಮಾಡಬೇಕಾದ್ರೆ ಮೆದುಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುಧಾಕರ್‌ ಅವರ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ವೈದ್ಯರು ಸಿಟಿ ಸ್ಕ್ಯಾನ್‌ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್‌ ಏನು ಎಂದು ಗೊತ್ತಾಗಲಿದೆ ಎಂದು ಹೇಳಿದರು.

Tags:
error: Content is protected !!