ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಹಾಗೂ ಮಂಗಳಸೂತ್ರ ತೆಗೆಸಬಾರದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು, ಹಿಂದುಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಈ ಆದೇಶವನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಹಾಗೂ ಆಭರಣಗಳನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ನಲ್ಲಿ ಸ್ಪಷ್ಟನೆ ನೀಡಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು, ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…