ಮಂಗಳೂರು : ನಾನು ಸಿದ್ದರಾಮಯ್ಯ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಹಳೇ ಸಿದ್ದರಾಮಯ್ಯ ಹೀಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಮತ್ತು ಮುಡಾ ಹಗರಣ ಕುರಿತು ಮಾತನಾಡಿದ ಸಚಿವರು, ʻಸಿಎಂ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ಹಳೇ ಸಿದ್ದರಾಮಯ್ಯ ಹೀಗಿರಲಿಲ್ಲ. ನಾನು ಸಿದ್ದರಾಮಯ್ಯ ಜೊತೆ ಮಂತ್ರಿಯಾಗಿ, ಶಾಸಕನಾಗಿ ಕೆಲಸ ಮಾಡಿದ್ದೇನೆ. ಇವತ್ತು ಇರುವ ಸಿದ್ದರಾಮಯ್ಯನವರ ವರ್ತನೆ ನೋಡಿದರೆ ನನಗೂ ಒಂದು ರೀತಿ ಅನುಮಾನ ಮೂಡಿದೆ. ವಾಸ್ತವ ಯಾರೂ ಮುಚ್ಚಿಡಲು ಆಗಲ್ಲ. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಯಾರು ತಿಳಿದುಕೊಳ್ಳಬಾರದು. ಸಿದ್ದರಾಮಯ್ಯ ತಪ್ಪು ತಿದ್ದಿಕೊಂಡು ಜನರಿಗೆ ವಾಸ್ತವಾಂಶ ಏನೆಂದು ತಿಳಸಬೇಕು. ಆಗ ಅವರು ಹಳೆ ಸಿದ್ದರಾಮಯ್ಯ ಆಗುತ್ತಾರೆʼ ಎಂದು ಲೇವಡಿ ಮಾಡಿದರು.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…