ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. ಹೀಗಾಗಿಯೇ ಜನ ಅವರನ್ನು ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ. ಅವರಿಗೆ ಯಾವಾಗ ಏನು ಆಗಬೇಕು, ಹಾಗೆಲ್ಲಾ ಅವರು ಚೇಂಜ್ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಇನ್ನು ಒಕ್ಕಲಿಗರ ಬಗ್ಗೆ ನಾನು ಎಂದಿಗೂ ಮಾತನಾಡಿಲ್ಲ, ಕೇವಲ ಕುಮಾರಸ್ವಾಮಿ ಅವರ ಬಗ್ಗೆ ಅಷ್ಟೇ ಮಾತನಾಡಿದ್ದೇನೆ. ನಾನು ಆದಿಚುಂಚನಗಿರಿ ಮಠದಲ್ಲಿ ಬೆಳೆದವನು. ಜೆಡಿಎಸ್ಗೆ ಬರುವ ಮುಂಚೆ ಕಾಂಗ್ರೆಸ್ನಲ್ಲಿದ್ದವನು. ಜೆಡಿಎಸ್ಗೆ ಹೋಗಲು ಮುಖ್ಯ ಕಾರಣ ಮಠದ ದೊಡ್ಡಸ್ವಾಮಿಗಳು. ಪ್ರತೀ ಶನಿವಾರ ಬಂದಾಗ ಅವರು ರಾತ್ರಿ ಮಲಗುವವರೆಗೂ ಅವರೊಂದಿಗೆಯೇ ಇದ್ದವನು ನಾನು. ಹೀಗಾಗಿ ನನಗೆ ಒಕ್ಕಲಿಗರ ಬಗ್ಗೆ ಅಪಾರ ಗೌರವವಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…