ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. ಹೀಗಾಗಿಯೇ ಜನ ಅವರನ್ನು ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ. ಅವರಿಗೆ ಯಾವಾಗ ಏನು ಆಗಬೇಕು, ಹಾಗೆಲ್ಲಾ ಅವರು ಚೇಂಜ್ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಇನ್ನು ಒಕ್ಕಲಿಗರ ಬಗ್ಗೆ ನಾನು ಎಂದಿಗೂ ಮಾತನಾಡಿಲ್ಲ, ಕೇವಲ ಕುಮಾರಸ್ವಾಮಿ ಅವರ ಬಗ್ಗೆ ಅಷ್ಟೇ ಮಾತನಾಡಿದ್ದೇನೆ. ನಾನು ಆದಿಚುಂಚನಗಿರಿ ಮಠದಲ್ಲಿ ಬೆಳೆದವನು. ಜೆಡಿಎಸ್ಗೆ ಬರುವ ಮುಂಚೆ ಕಾಂಗ್ರೆಸ್ನಲ್ಲಿದ್ದವನು. ಜೆಡಿಎಸ್ಗೆ ಹೋಗಲು ಮುಖ್ಯ ಕಾರಣ ಮಠದ ದೊಡ್ಡಸ್ವಾಮಿಗಳು. ಪ್ರತೀ ಶನಿವಾರ ಬಂದಾಗ ಅವರು ರಾತ್ರಿ ಮಲಗುವವರೆಗೂ ಅವರೊಂದಿಗೆಯೇ ಇದ್ದವನು ನಾನು. ಹೀಗಾಗಿ ನನಗೆ ಒಕ್ಕಲಿಗರ ಬಗ್ಗೆ ಅಪಾರ ಗೌರವವಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…