ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ. ಅವರನ್ನು ಎಲ್ಲರೂ ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದರಲ್ಲಿ ಬುದ್ಧಿವಂತರು. ಹೀಗಾಗಿಯೇ ಜನ ಅವರನ್ನು ಯೂಟರ್ನ್ ಕುಮಾರಸ್ವಾಮಿ ಎಂದು ಕರೆಯುತ್ತಾರೆ. ಅವರಿಗೆ ಯಾವಾಗ ಏನು ಆಗಬೇಕು, ಹಾಗೆಲ್ಲಾ ಅವರು ಚೇಂಜ್ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಇನ್ನು ಒಕ್ಕಲಿಗರ ಬಗ್ಗೆ ನಾನು ಎಂದಿಗೂ ಮಾತನಾಡಿಲ್ಲ, ಕೇವಲ ಕುಮಾರಸ್ವಾಮಿ ಅವರ ಬಗ್ಗೆ ಅಷ್ಟೇ ಮಾತನಾಡಿದ್ದೇನೆ. ನಾನು ಆದಿಚುಂಚನಗಿರಿ ಮಠದಲ್ಲಿ ಬೆಳೆದವನು. ಜೆಡಿಎಸ್ಗೆ ಬರುವ ಮುಂಚೆ ಕಾಂಗ್ರೆಸ್ನಲ್ಲಿದ್ದವನು. ಜೆಡಿಎಸ್ಗೆ ಹೋಗಲು ಮುಖ್ಯ ಕಾರಣ ಮಠದ ದೊಡ್ಡಸ್ವಾಮಿಗಳು. ಪ್ರತೀ ಶನಿವಾರ ಬಂದಾಗ ಅವರು ರಾತ್ರಿ ಮಲಗುವವರೆಗೂ ಅವರೊಂದಿಗೆಯೇ ಇದ್ದವನು ನಾನು. ಹೀಗಾಗಿ ನನಗೆ ಒಕ್ಕಲಿಗರ ಬಗ್ಗೆ ಅಪಾರ ಗೌರವವಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…