ರಾಜ್ಯ

ವಕೀಲರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಭರವಸೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದರು.

ಇದನ್ನೂ ಓದಿ:-ಓದುಗರ ಪತ್ರ: ಮುಚ್ಚಿಸುವವರ‍್ಯಾರು ?

ವಸತಿರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಿಸಿಕೊಡಬೇಕೆಂಬ ಮನವಿಯನ್ನು ಪರಿಗಣಿಸಿ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಅಥವಾ ರಾಜೀವ್‌ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ರಾಜೀವ್‌ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನ ಹಲವೆಡೆ ಎರಡು ಬಿ.ಎಚ್.ಕೆ ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago