ಬೆಂಗಳೂರು: ನಗರದಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಭರವಸೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಗೃಹ ಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದರು.
ಇದನ್ನೂ ಓದಿ:-ಓದುಗರ ಪತ್ರ: ಮುಚ್ಚಿಸುವವರ್ಯಾರು ?
ವಸತಿರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಿಸಿಕೊಡಬೇಕೆಂಬ ಮನವಿಯನ್ನು ಪರಿಗಣಿಸಿ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.
ರಾಜೀವ್ ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನ ಹಲವೆಡೆ ಎರಡು ಬಿ.ಎಚ್.ಕೆ ವಸತಿ ಸಂಕೀರ್ಣ ನಿರ್ಮಾಣ ಮಾಡಲಾಗಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…