ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹಮದ್ ನೀಡಿರುವ ಹೇಳಿಕೆಯು ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅವರು ಕೆಲವೊಮ್ಮೆ ಆಡು ಭಾಷೆಯಲ್ಲಿ ಮಾತನಾಡುತ್ತಾರೆ. ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ನಾನು ಚನ್ನಪಟ್ಟಣದಲ್ಲಿದ್ದೆ. ಅದೇನು ಅಂತಹ ದೊಡ್ಡ ವಿಚಾರವೇನಲ್ಲ. ಈಗಾಗಲೇ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಸಾರ್ವಜನಿಕವಾಗಿ ಮಾತನಾಡಬೇಕಾದರೆ ನಾವು ಸ್ವಲ್ಪ ತಾಳ್ಮೆಯಿಂದ ಮಾತನಾಡಬೇಕು ಎಂದು ಸಲಹೆ ನೀಡಿದರು.
ಇನ್ನು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ” ಹುಚ್ಚಾಸ್ಪತ್ರೆಯಲ್ಲಿರಬೇಕಾದವರು ಕ್ಯಾಬಿನೆಟ್ನಲ್ಲಿದ್ದಾರೆ ” ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಜ್ಞಾನೇಂದ್ರರಿಗೆ ಬುದ್ಧಿ ಭ್ರಮಣೆಯಾಗಿದೆ. ಅವರಿಗೆ ಮಾಜಿ ಸಚಿವರು ಎಂಬ ಪರಿಜ್ಞಾನ ಇಲ್ಲದೇ ಒಬ್ಬ ಹಾಲಿ ಸಚಿವರ ವಿರುದ್ಧ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಮೊದಲು ಅವರ ಮೇಲಿರುವ ಆರೋಪಗಳಿಗೆ ಉತ್ತರ ನೀಡಲಿ ಎಂದು ತಿರುಗೇಟು ನೀಡಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…