ಬೆಂಗಳೂರು : ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.
ರಾಜ್ಯಪಾಲರಿಗೆ ಧನ್ಯವಾದ
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ಯು.ಟಿ. ಖಾದರ್ ಧನ್ಯವಾದ ತಿಳಿಸಿದ್ದಾರೆ. ಲೋಕಭವನಕ್ಕೆ ತೆರಳಿ ಗವರ್ನರ್ ಭೇಟಿಯಾಗಿರುವ ಅವರು, ರಾಜ್ಯಪಾಲರಿಗೆ ರಾಜೀನಾಮೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಹಿಂದೆ ಆರೋಗ್ಯ ಸಚಿವರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಖಾದರ್ಗೆ ಡಿಕೆಶಿ ಸರ್ಕಾರದಲ್ಲೂ ಅದೇ ಖಾತೆ ಸಿಗಬಹುದೆಂಬ ನಿರೀಕ್ಷೆ ಇದೆ.
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್ ಪರೀಕ್ಷೆ ಅಕ್ರಮ ಹಾಗೂ ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…
ನವದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…
ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…