ರಾಜ್ಯ

ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಚಿವರ ಮೆಚ್ಚುಗೆ

ದೂರವಾಣಿ ಮೂಲಕ ಸಂತಸ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿಕೊಟ್ಟ ಸಚಿವರು

ಬೆಂಗಳೂರು:ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ನೀಡುತ್ತಿರುವ ‘ಗೃಹಲಕ್ಷ್ಮೀ’ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ‘ಗೃಹಲಕ್ಷ್ಮೀ’ ಜಾರಿಗೆ ತಂದಿದ್ದು ಸಾರ್ಥಕವಾಗುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹಬ್ಬದ ಊಟ ಹಾಕಿಸಿದ್ದಾರೆ.

ಅಜ್ಜಿಯ ಈ ನಡೆಗೆ ರಾಜ್ಯದೆಲ್ಲೆಡೆಯಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಕೂಡ ಅಜ್ಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಗೃಹಲಕ್ಷ್ಮೀ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿ ಅಕ್ಕಾತಾಯಿ ಲಂಗೋಟಿ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೂರವಾಣಿ ಮೂಲಕ ಸಂಪರ್ಕಿಸಿ; ಹರ್ಷ ವ್ಯಕ್ತಪಡಿಸಿದ್ದಾರೆ. ದೂರವಾಣಿಯಲ್ಲಿ ಅಜ್ಜಿಯೊಂದಿಗೆ ಬಹಳ ಹೊತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯಂತ ಗೌರವ ಮತ್ತು ಸಂಯಮದಿಂದ, ಬೆಳಗಾವಿ ಶೈಲಿಯಲ್ಲೇ ಮಾತನಾಡಿದರು.

ಈಗ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದಿ; ನಿನ್ನ ಮಗಳಾದ ನನಗೆ ಯಾವಾಗ ಊಟ ಹಾಕಿಸುತ್ತೀ ಎನ್ನುವ ಸಚಿವರ ಪ್ರಶ್ನೆಗೆ, ಜರೂರೇ ಬಾ ನಿನಗೂ ಊಟ ಹಾಕಿಸ್ತೀನಿ; ನೀನೇ ನಮಗೆಲ್ಲ ಗೃಹಲಕ್ಷ್ಮೀ ಹಣ ಕೊಡುವ ಮನೆ ಮಗಳು.. ನಿನಗೆ ಇಲ್ಲ ಎನ್ನಲಾಗುವುದೇ ಎಂದರು ಅಜ್ಜಿ.

ಅಜ್ಜಿ ಮಾತುಗಳಿಂದ ಬಹಳ ಸಂತಸಗೊಂಡ ಸಚಿವರು; ನಿನಗೊಂದು ರೇಷ್ಮೆ ಸೀರೆ ಕಳುಹಿಸಿರುವುದಾಗಿ ಅಜ್ಜಿಗೆ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ ನಿಮ್ಮಂತವರ ಮನೆಗೆ ತಲುಪುತ್ತಿರುವುದರಿಂದ ಏನೆಲ್ಲ ಅನುಕೂಲವಾಗುತ್ತಿದೆ ಎಂದು ತಿಳಿದು ಸಂತಸವಾಗುತ್ತಿದೆ; ಬಡ ಜನರ ಬದುಕಿಗೆ ನೆರವಾಗಬೇಕು; ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತಮ್ಮ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮೀ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಸಚಿವರು ಹೇಳಿದರು.
ತಮ್ಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೂಲಕ ಸಚಿವರು ಅಜ್ಜಿಗೆ ರೇಶ್ಮೆ ಸೀರೆ ಮತ್ತು ಹೋಳಿಗೆ ಕಳುಹಿಸಿ ಕೊಟ್ಟಿದ್ದು, ಅಜ್ಜಿಗೆ ಶಾಲು ಹೊದೆಸಿ ಸನ್ಮಾನಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

35 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

40 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

57 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

1 hour ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago