ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರು ಬಹಿರಂಗ: ಶಾಸಕ ಯತ್ನಾಳ್‌ಗೆ ಸವಾಲ್‌ ಹಾಕಿದ ಕಾಂಗ್ರೆಸ್‌ ಸಚಿವರು

ಬೆಂಗಳೂರು: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗ ಪಡಿಸುವೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಸವಾಲ್‌ ಹಾಕಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌17) ಈ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್‌ ಲಾಡ್‌ ಅವರು, ಶಾಸಕ ಯತ್ನಾಳ್‌ ಅವರು ಆ ಸಚಿವರ ಹೆಸರನ್ನು ಬಹಿರಂಗ ಪಡಿಸಲಿ ಒಳ್ಳೆಯದು. ಸಚಿವರು ಯಾರೆಂದು ಹೇಳಿದರೆ ತನಿಖೆಗೂ ಅನುಕೂಲವಾಗಲಿದೆ, ಈಗಲೇ ಯಾಕೆ ಹೇಳಬಾರದು? ಅಲ್ಲದೇ ಅವರು ಹೇಳಿರುವುದು ಸುಳ್ಳಾ ಅಥವಾ ಸತ್ಯನಾ ಎಂಬುದು ರಾಜ್ಯದ ಜನತೆಗೂ ತಿಳಿಯಲಿದೆ. ಅವರು ನೀಡಿರುವ ಹೇಳಿಕೆಯಲ್ಲಿ ಸತ್ಯವಿದ್ದರೆ ಈಗಲೇ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್‌

ಈ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಮಾತನಾಡಿ, ಶಾಸಕ ಯತ್ನಾಳ್‌ ಹೊರಗಡೆ ಹೇಳಿಕೆ ನೀಡುವುದು ಬೇಡ, ಅವರಿಗೆ ತಾಕತ್ತಿದ್ದರೆ ಆ ಸಚಿವರ ಹೆಸರು ಹೇಳಲಿ. ಬೇಕಾದರೆ ಅಧಿವೇಶನದಲ್ಲೇ ಬಹಿರಂಗಪಡಿಸಲಿ ಯಾರು ಬೇಡವೆಂದು ಹೇಳಿದ್ದು. ಆ ಪ್ರಕರಣದಲ್ಲಿ ಯಾರು ಯಾರು ಕೇಂದ್ರ ಸಚಿವರು, ಇದ್ದಾರೆ, ಅವರ ಪಕ್ಷದವರು ಯಾರಿದ್ದಾರೆ ಹಾಗೂ ನಮ್ಮ ಪಕ್ಷದವರು ಇದ್ದಾರೆ ಎಂದು ಹೇಳಲಿ. ಅದನ್ನು ಬಿಟ್ಟು ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಟಾಂಗ್‌ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರು ಪ್ರತಿಕ್ರಿಯಿಸಿ, ಯತ್ನಾಳ್‌ ಅವರ ಬಳಿ ಮಾಹಿತಿ ಇದ್ದರೆ ಅದನ್ನು ಬಹಿರಂಗ ಪಡಿಸಲಿ. ಈ ವಿಚಾರದಲ್ಲಿ ಅವರಿಗೆ ಯಾರದ್ದೂ ಅಡ್ಡಿ ಇಲ್ಲ. ಅವರು ಎಷ್ಟು ಬೇಗ ಆ ಸಚಿವರ ಹೆಸರು ಹೇಳುತ್ತಾರೋ ಅಷ್ಟೂ ಬೇಗ ತನಿಖೆ ಸುಲಭವಾಗಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

10 mins ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

38 mins ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

1 hour ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

2 hours ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

2 hours ago