ರಾಜ್ಯ

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರು ಬಹಿರಂಗ: ಶಾಸಕ ಯತ್ನಾಳ್‌ಗೆ ಸವಾಲ್‌ ಹಾಕಿದ ಕಾಂಗ್ರೆಸ್‌ ಸಚಿವರು

ಬೆಂಗಳೂರು: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗ ಪಡಿಸುವೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಸವಾಲ್‌ ಹಾಕಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌17) ಈ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್‌ ಲಾಡ್‌ ಅವರು, ಶಾಸಕ ಯತ್ನಾಳ್‌ ಅವರು ಆ ಸಚಿವರ ಹೆಸರನ್ನು ಬಹಿರಂಗ ಪಡಿಸಲಿ ಒಳ್ಳೆಯದು. ಸಚಿವರು ಯಾರೆಂದು ಹೇಳಿದರೆ ತನಿಖೆಗೂ ಅನುಕೂಲವಾಗಲಿದೆ, ಈಗಲೇ ಯಾಕೆ ಹೇಳಬಾರದು? ಅಲ್ಲದೇ ಅವರು ಹೇಳಿರುವುದು ಸುಳ್ಳಾ ಅಥವಾ ಸತ್ಯನಾ ಎಂಬುದು ರಾಜ್ಯದ ಜನತೆಗೂ ತಿಳಿಯಲಿದೆ. ಅವರು ನೀಡಿರುವ ಹೇಳಿಕೆಯಲ್ಲಿ ಸತ್ಯವಿದ್ದರೆ ಈಗಲೇ ಹೊರಬರಲಿ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್‌

ಈ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಮಾತನಾಡಿ, ಶಾಸಕ ಯತ್ನಾಳ್‌ ಹೊರಗಡೆ ಹೇಳಿಕೆ ನೀಡುವುದು ಬೇಡ, ಅವರಿಗೆ ತಾಕತ್ತಿದ್ದರೆ ಆ ಸಚಿವರ ಹೆಸರು ಹೇಳಲಿ. ಬೇಕಾದರೆ ಅಧಿವೇಶನದಲ್ಲೇ ಬಹಿರಂಗಪಡಿಸಲಿ ಯಾರು ಬೇಡವೆಂದು ಹೇಳಿದ್ದು. ಆ ಪ್ರಕರಣದಲ್ಲಿ ಯಾರು ಯಾರು ಕೇಂದ್ರ ಸಚಿವರು, ಇದ್ದಾರೆ, ಅವರ ಪಕ್ಷದವರು ಯಾರಿದ್ದಾರೆ ಹಾಗೂ ನಮ್ಮ ಪಕ್ಷದವರು ಇದ್ದಾರೆ ಎಂದು ಹೇಳಲಿ. ಅದನ್ನು ಬಿಟ್ಟು ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಟಾಂಗ್‌ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರು ಪ್ರತಿಕ್ರಿಯಿಸಿ, ಯತ್ನಾಳ್‌ ಅವರ ಬಳಿ ಮಾಹಿತಿ ಇದ್ದರೆ ಅದನ್ನು ಬಹಿರಂಗ ಪಡಿಸಲಿ. ಈ ವಿಚಾರದಲ್ಲಿ ಅವರಿಗೆ ಯಾರದ್ದೂ ಅಡ್ಡಿ ಇಲ್ಲ. ಅವರು ಎಷ್ಟು ಬೇಗ ಆ ಸಚಿವರ ಹೆಸರು ಹೇಳುತ್ತಾರೋ ಅಷ್ಟೂ ಬೇಗ ತನಿಖೆ ಸುಲಭವಾಗಲಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

10 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

10 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

10 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

10 hours ago