ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಅಷ್ಟೇ
ಬೆಂಗಳೂರು : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್ಆಪ್ ಮೆಸೇಜ್ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್ಗಳು ಹರಿದಾಡುತ್ತಿವೆ. ಈ ಮೆಸೇಜ್ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಬಾರದು. ಹಾಗೆಯೇ, ನಂಬಿ ಮೋಸಹೋಗಬಾರದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…