ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಅಷ್ಟೇ
ಬೆಂಗಳೂರು : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್ಆಪ್ ಮೆಸೇಜ್ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ ಎಚ್ಚರವಹಿಸುವಂತೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದ ಹಿನ್ನಲೆಯಲ್ಲಿ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ಸರ್ಕಾರದ ಅಧಿಸೂಚನೆ ಮೂಲಕ ಕರಡು “ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025” ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ನಿಯಮಾವಳಿಗಳಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಈ ಕರಡು ನಿಯಮಾವಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸ್ವೀಕರಿಸುವ ಉದ್ದೇಶದಿಂದ 15 ದಿನಗಳ ಕಾಲ ಕಾಲಾವಕಾಶ ನೀಡಲಾಗಿರುತ್ತದೆ. ಆದರೆ, ಇದೇ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ನೇಮಕಾತಿ ಪ್ರಕ್ರಿಯೆ ಎನ್ನುವಂತೆ ಬಿಂಬಿಸಲಾಗುತ್ತಿರುವ ಹಲವಾರು ಮೇಸೇಜ್ಗಳು ಹರಿದಾಡುತ್ತಿವೆ. ಈ ಮೆಸೇಜ್ಗಳು ಸುಳ್ಳಾಗಿದ್ದು ಯಾವುದೇ ನೇಮಕಾತಿಯನ್ನು ನಡೆಸಲು ಅರ್ಜಿಯನ್ನು ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಬಾರದು. ಹಾಗೆಯೇ, ನಂಬಿ ಮೋಸಹೋಗಬಾರದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…