ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬೌದ್ಧ ಸಮುದಾಯದವರು ರಾಜ್ಯದಲ್ಲಿ ನೆಲೆಸಿರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿ ಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.2 ಕೋಟಿ ರೂ ಅನುದಾನದ ಚೆಕ್ಕನ್ನು ಸಚಿವರು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.
ಬಳಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯವಾದ ಲ್ಯಾಪ್ಟಾಪ್, ಡೆಸ್ಕ್ ಟಾಪ್ ಖರೀದಿಸಲು 2 ಲಕ್ಷ ರೂ ನೆರವನ್ನು ವೈಯಕ್ತಿಕವಾಗಿ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…