ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬೌದ್ಧ ಸಮುದಾಯದವರು ರಾಜ್ಯದಲ್ಲಿ ನೆಲೆಸಿರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿ ಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.2 ಕೋಟಿ ರೂ ಅನುದಾನದ ಚೆಕ್ಕನ್ನು ಸಚಿವರು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.
ಬಳಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯವಾದ ಲ್ಯಾಪ್ಟಾಪ್, ಡೆಸ್ಕ್ ಟಾಪ್ ಖರೀದಿಸಲು 2 ಲಕ್ಷ ರೂ ನೆರವನ್ನು ವೈಯಕ್ತಿಕವಾಗಿ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…