ಮೈಸೂರು: ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜೊತೆಗಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾದ ಒಂದು ಕೋಟಿ ರೂ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬೌದ್ಧ ಸಮುದಾಯದವರು ರಾಜ್ಯದಲ್ಲಿ ನೆಲೆಸಿರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿ ಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.2 ಕೋಟಿ ರೂ ಅನುದಾನದ ಚೆಕ್ಕನ್ನು ಸಚಿವರು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು.
ಬಳಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯವಾದ ಲ್ಯಾಪ್ಟಾಪ್, ಡೆಸ್ಕ್ ಟಾಪ್ ಖರೀದಿಸಲು 2 ಲಕ್ಷ ರೂ ನೆರವನ್ನು ವೈಯಕ್ತಿಕವಾಗಿ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…