ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ.
ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ. ಈ ಪೋಸ್ಟರ್ ಬಗ್ಗೆ ಇದೀಗ ಭಾರೀ ಚರ್ಚೆ ಶುರುವಾಗಿದೆ.
ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನು ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಬೆಂಬಲಿಗರು ಪೋಸ್ಟರ್ ಅಂಟಿಸಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಸ್ಥಳಕ್ಕೆ ಶೇಷಾದ್ರಿಪುರ ಉಪ ವಿಭಾಗ ಎಸಿಪಿ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…