ರಾಜ್ಯ

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು!

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ.

ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ. ಈ ಪೋಸ್ಟರ್ ಬಗ್ಗೆ ಇದೀಗ ಭಾರೀ ಚರ್ಚೆ ಶುರುವಾಗಿದೆ.

ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನು ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಬೆಂಬಲಿಗರು ಪೋಸ್ಟರ್ ಅಂಟಿಸಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಸ್ಥಳಕ್ಕೆ ಶೇಷಾದ್ರಿಪುರ ಉಪ ವಿಭಾಗ ಎಸಿಪಿ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

4 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

17 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

23 mins ago

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

30 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

37 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

41 mins ago