ರಾಜ್ಯ

ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು!

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ.

ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ. ಈ ಪೋಸ್ಟರ್ ಬಗ್ಗೆ ಇದೀಗ ಭಾರೀ ಚರ್ಚೆ ಶುರುವಾಗಿದೆ.

ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನು ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಡಿಕೆ ಬೆಂಬಲಿಗರು ಪೋಸ್ಟರ್ ಅಂಟಿಸಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಸ್ಥಳಕ್ಕೆ ಶೇಷಾದ್ರಿಪುರ ಉಪ ವಿಭಾಗ ಎಸಿಪಿ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

23 mins ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

33 mins ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

1 hour ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

1 hour ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

2 hours ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

2 hours ago