Mysore
27
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿ ಶವವಾಗಿ ಪತ್ತೆ

Student Death

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ.

ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ ಸುಮಾರು 40 ಮಂದಿ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ಸುಮಾರಿಗೆ ಜಲಪಾತದ ಬಳಿ ನಾಪತ್ತೆಯಾಗಿದ್ದಳು.

ಕುಟುಂಬದವರು ಸಂಜೆ 8 ರವರೆಗೆ ಸ್ವತಃ ಹುಡುಕಾಟ ನಡೆಸಿ, ನಂತರ ಪೊಲೀಸರಿಗೆ ತಿಳಿಸಿದ್ದರು. ಇದರ ನಂತರ ಪೊಲೀಸ್, ಅರಣ್ಯ ಇಲಾಖೆ, ಎಸ್‌ಡಿಆರ್‌ಎಫ್ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿದ್ದವು. ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ಆಕೆಯ ಮೃತದೇಹ ಪತ್ತೆಯಾಗಿದೆ.

ಪ್ರದೇಶವು ಗುಡ್ಡಗಾಟು ಮತ್ತು ಜಲಪಾತಗಳಿಂದ ಕೂಡಿದ್ದು, ಭೂಪ್ರದೇಶ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿತ್ತು. ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!