Student Death
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದಾರೆ.
ಮೃತಳು ಶ್ರೀನಂದ (15 ವರ್ಷ, ಪಾಲಕ್ಕಾಡ್ ಜಿಲ್ಲೆ, ಕೇರಳ) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬದ ಸುಮಾರು 40 ಮಂದಿ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ಸುಮಾರಿಗೆ ಜಲಪಾತದ ಬಳಿ ನಾಪತ್ತೆಯಾಗಿದ್ದಳು.
ಕುಟುಂಬದವರು ಸಂಜೆ 8 ರವರೆಗೆ ಸ್ವತಃ ಹುಡುಕಾಟ ನಡೆಸಿ, ನಂತರ ಪೊಲೀಸರಿಗೆ ತಿಳಿಸಿದ್ದರು. ಇದರ ನಂತರ ಪೊಲೀಸ್, ಅರಣ್ಯ ಇಲಾಖೆ, ಎಸ್ಡಿಆರ್ಎಫ್ ತಂಡಗಳು ತೀವ್ರ ಹುಡುಕಾಟ ನಡೆಸುತ್ತಿದ್ದವು. ಮೂರು ದಿನಗಳ ನಂತರ ಶುಕ್ರವಾರ ಮಧ್ಯಾಹ್ನ ಆಕೆಯ ಮೃತದೇಹ ಪತ್ತೆಯಾಗಿದೆ.
ಪ್ರದೇಶವು ಗುಡ್ಡಗಾಟು ಮತ್ತು ಜಲಪಾತಗಳಿಂದ ಕೂಡಿದ್ದು, ಭೂಪ್ರದೇಶ ಕಠಿಣವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸವಾಲು ಎದುರಾಗಿತ್ತು. ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…